ಮಧ್ಯಪ್ರದೇಶ: ತಂದೆ ಮೇಲಿನ ವೈಷಮ್ಯಕ್ಕೆ ವ್ಯಕ್ತಿಯೊಬ್ಬ 3 ತಿಂಗಳ ಮಗುವನ್ನು ಕೊಲೆ ಮಾಡಿರುವ ಘಟನ ನಡೆದಿದೆ.
ಘಟನೆ ಸತ್ನಾದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ, ಹನುಮಂತನಗರದ ನಿವಾಸಿ ವೀರೇಂದ್ರ ಚೌಧರಿ ಎಂದು ಗುರುತಿಸಲಾದ ಆರೋಪಿಯು ನವೆಂಬರ್ 6 ರಂದು ದೇವಸ್ಥಾನದ ಬಳಿ ಪೋಷಕರೊಂದಿಗೆ ಮಲಗಿದ್ದ ಶಿಶುವನ್ನು ಅಪಹರಿಸಿ, ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಶಿಶುವಿನ ತಂದೆ ಪ್ರಿನ್ಸ್ ಪಾಂಡೆ ಅವರು ನವೆಂಬರ್ 7 ರಂದು ಸತ್ನಾದ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ತಾನು ಮತ್ತು ತನ್ನ ಪತ್ನಿ ದೇವಸ್ಥಾನದ ಬಳಿ ಮಲಗಿದ್ದಾಗ ಮಗುವನ್ನು ಯಾರೋ ಅಪಹರಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಕಾಣೆಯಾದ ಮಗುವಿನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಅವರು ನವೆಂಬರ್ 8 ರಂದು ಪನ್ನಿ ಲಾಲ್ ಚೌಕ್‌ನಲ್ಲಿ ಗೋಣಿಚೀಲದಲ್ಲಿ ಶಿಶುವಿನ ದೇಹವನ್ನು ಪತ್ತೆಹಚ್ಚಿದರು. ಆರೋಪಿಗಳ ಪತ್ತೆಗೆ ತನಿಖೆಯನ್ನು ಪ್ರಾರಂಭಿಸಲಾಯಿತು.


Discover more from ಕರುನಾಡು ಫೈನಾನ್ಸ್

Subscribe to get the latest posts sent to your email.

Leave a Reply